Breaking News

ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ:ಎಸ್.ಎಲ್.ಭೈರಪ್ಪ

Spread the love

ಮೈಸೂರು: ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ ಎಂದು ಕಳೆದ ವರ್ಷ ದಸರಾ ಉದ್ಘಾಟಿಸಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಜಂಬೂಸವಾರಿಯನ್ನು ಮಾವುತರು ಮಾಡುತ್ತಾರೆ. ಇದಕ್ಕೆ ಜನ ಯಾಕೆ ಬೇಕು ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಎಲ್ಲರೂ ಅವರ ಮನೆಯಲ್ಲೇ ದಸರಾ ಪೂಜೆ ಮಾಡಿಲಿ. ಬೆಟ್ಟದಲ್ಲಿ ಪೂಜೆ ನಡೆಯಲಿ. ಇದಕ್ಕೆ ಯಾಕೆ 200 ಮಂದಿ ಭಾಗಿಯಾಗಬೇಕು. ಕೊರೊನಾ ಹೆಚ್ಚಾದರೆ ಹೊಣೆ ಯಾರು ಎಂದು ದಸರಾಗೆ ಜನ ಸೇರುವುದಕ್ಕೆ ಎಸ್.ಎಲ್.ಭೈರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಜಂಬೂ ಸವಾರಿ ನಡೆಸೋದು ಮಾವುತರು, ಇದಕ್ಕೆ ಜನ ಬೇಕಾಗಿಲ್ಲ. ಕೆಲವರು ದಸರಾದಿಂದ ಬ್ಯುಸಿನೆಸ್ ಅಂತಾರೆ. ಜನರನ್ನ ಒಟ್ಟಾಗಿ ಸೇರಿಸಿದರೆ ಕೊರೊನಾ ಹರಡುವುದಿಲ್ಲವೆ? ಬ್ಯುಸಿನೆಸ್ ಎಲ್ಲ ಬಿಟ್ಟು ಜನರ ಆರೋಗ್ಯದ ಬಗ್ಗೆ ಯೋಚಿಸಿ ಎಂದು ಅವರು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

Spread the loveಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ