Breaking News
Home / ರಾಜಕೀಯ / ಸರ್ವರ್‌ ಸಮಸ್ಯೆ: ನವೋದಯಕ್ಕೆ ಅರ್ಜಿ ಸಲ್ಲಿಸಲು ಪರದಾಟ

ಸರ್ವರ್‌ ಸಮಸ್ಯೆ: ನವೋದಯಕ್ಕೆ ಅರ್ಜಿ ಸಲ್ಲಿಸಲು ಪರದಾಟ

Spread the love

ಬೆಂಗಳೂರು: ರಾಜ್ಯದಲ್ಲಿನ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಪೋಷಕರಿಗೆ ಸಾಧ್ಯವಾಗಿಲ್ಲ.

ಆನ್‌ಲೈನಲ್ಲಿ ಅರ್ಜಿ ಸಲ್ಲಿಸಲು ಇದೇ ಜನವರಿ 31 ಕೊನೆಯ ದಿನ.

ಪ್ರತಿ ದಿನವೂ ಸರ್ವರ್‌ ಸಮಸ್ಯೆ ಇದೆ. ನಿತ್ಯವೂ ಸೈಬರ್‌ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಮರಳುತ್ತಿದ್ದೇವೆ. ಸರ್ವರ್ ಸಮಸ್ಯೆ ಬಗೆಹರಿಸಬೇಕು. ಇಲ್ಲವೇ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಬೇಕು ಎಂದು ಗದಗ ಜಿಲ್ಲೆಯ ರಾಮಚಂದ್ರ ಒತ್ತಾಯಿಸಿದ್ದಾರೆ.

ಪ್ರತಿ ಜಿಲ್ಲೆಯ ನವೋದಯ ಶಾಲೆಯಲ್ಲೂ ಆ ಜಿಲ್ಲೆಯ ವಿದ್ಯಾರ್ಥಿಗಳಿಗಷ್ಟೆ ಪ್ರವೇಶ ನೀಡಲಾಗುತ್ತದೆ. 2022-23ನೇ ಸಾಲಿನಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪರೀಕ್ಷೆಗಳು ಏ.29ರಂದು ನಡೆಯಲಿವೆ.


Spread the love

About Laxminews 24x7

Check Also

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Spread the love ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ