Breaking News

ಬೆಳಗಾವಿಯಲ್ಲಿ ಅಮಿತ್‌ ಶಾ ಗೋಪ್ಯ ಸಭೆ

Spread the love

ಬೆಳಗಾವಿ: ‘ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು. ಬೆಂಗಳೂರನ್ನು ಹೊರತುಡಿಸಿದರೆ ಬೆಳಗಾವಿಯಲ್ಲೇ ಹೆಚ್ಚು ಕ್ಷೇತ್ರಗಳು ಇವೆ. ಎಲ್ಲ 18 ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಇದು ಎಲ್ಲರೂ ಒಂದಾಗಿದ್ದರೆ ಮಾತ್ರ ಸಾಧ್ಯ.

ಗೆಲುವಿಗೆ ಏನು ಬೇಕೋ ಆ ತಂತ್ರ ರೂಪಿಸೋಣ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಯ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಗರದ ಯುಕೆ-27 ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ‘ಹೈ ವೋಲ್ಟೇಜ್‌ ಮೀಟಿಂಗ್‌’ನಲ್ಲಿ ಮಾತನಾಡಿದ ಅವರು, ‘ಈಗ 13 ಸೀಟ್‌ ಗೆದ್ದಿದ್ದೇವೆ. ಒಂದಾಗಿ ಶ್ರಮಪಟ್ಟರೆ 18 ಕ್ಷೇತ್ರಗಳನ್ನೂ ಗೆಲ್ಲುವುದು ಕಷ್ಟವಲ್ಲ. ರಾಜ್ಯಮಟ್ಟದ ನಾಯಕರು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಜಿಲ್ಲಾ ನಾಯಕರು ಕಾರ್ಯಕರ್ತರೊಂದಿಗೆ ಸದಾ ಸಂಪರ್ಕದಲ್ಲಿರಬೇಕು. ಬೆಳಗಾವಿಯಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಇದ್ದ ಪರಿಸ್ಥಿತಿ ಈಗ ಇಲ್ಲ. ಬದಲಾವಣೆಗಳ ಬಗ್ಗೆ ಹಾಗೂ ಗೆಲುವಿನ ಸಾಧ್ಯತೆಗಳ ಬಗ್ಗೆ ಕಾರ್ಯಕರ್ತರಿಗೆ ಮನವರಿಕೆ ಮಾಡಬೇಕು’ ಎಂಬುದಾಗಿಯೂ ಅವರು ಸೂಚನೆ ನೀಡಿದರು ಎಂದು ಮುಖಂಡರೊಬ್ಬರು ತಿಳಿಸಿದರು.

ಈ ಸಭೆಗೆ ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಖಾನಾಪುರ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳನ್ನೂ ಆಹ್ವಾನಿಸಲಾಗಿತ್ತು.

 


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ