ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು.
ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.