Breaking News

ಮಹದಾಯಿ ವಿಚಾರದಲ್ಲಿ ರಾಜಿ ಇಲ್ಲ: ಗೋವಾ ಸಿ.ಎಂ ಸಾವಂತ್

Spread the love

ಣಜಿ: ಮಹದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ತಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಗೋವಾ ಸುಪ್ರೀಂ ಕೋರ್ಟ್‌ನಲ್ಲಿ ಬಲವಾದ ಕಾನೂನು ನಿಲುವು ಹೊಂದಿದೆ.

ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ನದಿ ನೀರಿನ ವಿವಾದ ಬಗೆಹರಿಸಲಾಗಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಗೋವಾದ ವಿರೋಧ ಪಕ್ಷಗಳು ಶನಿವಾರ ಸಾವಂತ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದವು.

ಗೋವಾ ಮತ್ತು ನೆರೆಯ ಕರ್ನಾಟಕ ಹಲವಾರು ವರ್ಷಗಳಿಂದ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಗಳದಲ್ಲಿ ತೊಡಗಿವೆ. ಒಪ್ಪಂದಗಳನ್ನು ನಿರ್ಲಕ್ಷಿಸುವ ಮೂಲಕ ಕರ್ನಾಟಕ ಈ ವಿಷಯದಲ್ಲಿ ಏಕಪಕ್ಷೀಯವಾಗಿ ಮುಂದುವರಿಯುತ್ತಿದೆ ಎಂದು ಗೋವಾ ಆಗಾಗ್ಗೆ ಆರೋಪಿಸುತ್ತಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ