Breaking News

ಬೆಳಗಾವಿಯಲ್ಲಿ ಕಾಂಗ್ರೆಸ್ 12 ಸೀಟು ಗೆಲ್ಲುವುದು ಖಚಿತ ಎಂದ ಎಂ.ಬಿ.ಪಾಟೀಲ್

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಗಳ ಬಗ್ಗೆ, ಅವರ ಮಾತಿನ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಉತ್ತರ ಕೊಡಬೇಕಾದದ್ದು ಅಧ್ಯಕ್ಷರು. ಅವರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾರನ್ನೂ ಯಾರೂ ಮುಗಿಸಲು ಆಗಲ್ಲ. ಎಲ್ಲವನ್ನೂ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇದೇ ವೇಳೆ ಬೆಳಗಾವಿಯಲ್ಲಿ ನಾವು 12 ಸ್ಥಾನ ಗೆಲ್ಲುವುದು ಖಚಿತ. ಮುಂಬೈ ಕರ್ನಾಟಕದಲ್ಲಿ ಹೆಚ್ಚಿನ ಸೀಟು ಗೆಲ್ಲುತ್ತೇವೆ. ಕಾಂಗ್ರೆಸ್ ಗೆ 130-140 ಸೀಟ್ ಗಿಂತ ಕಡಿಮೆ ಬರುವುದಿಲ್ಲ. ಬಿಜೆಪಿಯವರು 65-70 ಸೀಟು ದಾಟುವುದಿಲ್ಲ ಎಂದು ಹೇಳಿದರು.

ಪಂಚಮಸಾಲಿ ಸಮುದಾಯ ಮಾತ್ರವಲ್ಲ ಎಲ್ಲಾ ಸಮುದಾಯಕ್ಕೂ ನಾವು ಮಾನ್ಯತೆ ಕೊಡುತ್ತೇವೆ. ಸ್ಕ್ರೀನಿಂಗ್ ಕಮಿಟಿ, ಹಾಗೂ ಚುನಾವಣಾ ಸಮಿತಿ ಚರ್ಚೆ ಬಳಿಕ ಶೀಘ್ರವೇ ಪಟ್ಟಿ ಬಿಡುಗಡೆ ಮಾಡುತ್ತೇವೆ . ಯಾರು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ