Breaking News

ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ: .ಶ್ರೀರಾಮುಲು

Spread the love

ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಮೊದಲು ಬಾದಾಮಿಯಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು.

ಈಗ ಕೋಲಾರ, ವರುಣಾದಿಂದ ಸ್ಪರ್ಧೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಕ್ಷೇತ್ರ ಯಾವುದು ಎಂಬುದೇ ಸ್ಥಿರವಾಗಿಲ್ಲ. ಈ ಬಾರಿ ಅವರು ಎಲ್ಲೇ ಸ್ಪರ್ಧಿಸಿದರೂ ಸೋಲುವುದು ನಿಶ್ಚಿತ ಎಂದರು.

ಅಧಿಕಾರಕ್ಕಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾತ್ರೆ ಮಾಡುತ್ತಿವೆ. ಆದರೆ ಇವೆರಡೂ ಪಕ್ಷಗಳು ಅ ಧಿಕಾರಕ್ಕೆ ಬರಲ್ಲ. ಎರಡೂ ಪಕ್ಷಗಳು, ಸುಳ್ಳು ಮತ್ತು ಜೊಳ್ಳು ಯಾತ್ರೆಗಳನ್ನು ಮಾಡುತ್ತ ಜನರಿಗೆ ಮಂಕು ಬೂದಿ ಎರಚುತ್ತಿವೆ. ಈ ಯಾತ್ರೆಗಳಲ್ಲಿ ಹೇಳುತ್ತಿರುವುದು ಸುಳ್ಳು ಎಂಬುದು ಜನರಿಗೂ ಗೊತ್ತಿದೆ ಎಂದರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ