Breaking News
Home / ರಾಜಕೀಯ / ಇಂದು ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆ ಇಂದಿನಿಂದ ಏನೇನು? ಬದಲಾವಣೆ? ಇಲ್ಲಿದೆ ಕೆಲವೊಂದು ಮಾಹಿತಿ

ಇಂದು ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆ ಇಂದಿನಿಂದ ಏನೇನು? ಬದಲಾವಣೆ? ಇಲ್ಲಿದೆ ಕೆಲವೊಂದು ಮಾಹಿತಿ

Spread the love

ಡಿಟಿಎಚ್‌, ಕೇಬಲ್‌ ಟಿವಿ ದರ ದುಬಾರಿ

ಟಿವಿ ಚಾನೆಲ್‌ಗ‌ಳ ದರ ನಿಗದಿಗೆ ಸಂಬಂಧಿಸಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌)ದ ಹೊಸ ಆದೇಶ ಇಂದಿನಿಂದ ಚಾಲ್ತಿಗೆ ಬರಲಿದೆ. ಅದರಂತೆ ಗ್ರಾಹಕರು ಟಿವಿ ಚಾನೆಲ್‌ಗ‌ಳಿಗೆ ಸುಮಾರು ಶೇ.30ರಷ್ಟು ಹೆಚ್ಚು ಶುಲ್ಕ ತೆರಬೇಕಾಗುತ್ತದೆ ಎಂದು ಡಿಟಿಎಚ್‌ ಮತ್ತು ಕೇಬಲ್‌ ಆಪರೇಟರ್‌ಗಳು ಸುಳಿವು ನೀಡಿದ್ದಾರೆ.

ದರ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳುತ್ತೇವೆಂಬ ಭೀತಿಯನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಹೆಚ್ಚುವರಿ ಶುಲ್ಕ
ಕ್ರೆಡಿಟ್‌ ಕಾರ್ಡ್‌ ಮೂಲಕ ನೀವು ಬಾಡಿಗೆ ಪಾವತಿಸುತ್ತಿದ್ದರೆ ಇನ್ನು ಮುಂದೆ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ. ಬ್ಯಾಂಕ್‌ ಆಫ್ ಬರೋಡಾ ತನ್ನ ಕ್ರೆಡಿಟ್‌ ಕಾರ್ಡ್‌ದಾರರಿಗೆ ಇಂಥದ್ದೊಂದು ಶಾಕ್‌ ನೀಡಿದೆ. ಫೆ.1ರಿಂದ ಬ್ಯಾಂಕ್‌ ಆಫ್ ಬರೋಡಾ ಕ್ರೆಡಿಟ್‌ ಕಾರ್ಡ್‌ ಮೂಲಕ ನೀವು ಬಾಡಿಗೆ ಪಾವತಿಸಿದರೆ ಅದಕ್ಕೆ ಶೇ.1ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ಎಲ್‌ಪಿಜಿ ಬೆಲೆ‌
ಪ್ರತೀ ತಿಂಗಳ ಮೊದಲ ದಿನ ಅಡುಗೆ ಅನಿಲ ಬೆಲೆ ಪರಿಷ್ಕರಣೆಯಾಗುತ್ತದೆ. ಅದರಂತೆ ಎಲ್‌ಪಿಜಿ ಬೆಲೆ‌ ಇಂದು ಹೆಚ್ಚಾಗಲೂಬಹುದು, ಕಡಿಮೆ ಆಗಲೂಬಹುದು.

ಟಾಟಾ ಕಾರುಗಳು ದುಬಾರಿ
ವೆಚ್ಚ ಹೆಚ್ಚಳದ ಕಾರಣಕ್ಕೆ ತನ್ನ ಎಲ್ಲ ಪ್ರಯಾಣಿಕ ವಾಹನಗಳ ಬೆಲೆ ಏರಿಕೆ ಮಾಡುತ್ತಿರುವುದಾಗಿ ಈಗಾಗಲೇ ಟಾಟಾ ಮೋಟಾರ್ಸ್‌ ಘೋಷಿಸಿದೆ. ಅದರಂತೆ ಫೆ.1ರಿಂದ ನೆಕ್ಸಾನ್‌, ಅಲೂóಝ್, ಟಿಯಾಗೋ, ಹ್ಯಾರಿಯರ್‌ ಸಹಿತ ಎಲ್ಲ ಕಾರುಗಳ ಬೆಲೆ ಸರಾಸರಿ ಶೇ.1.2ರಷ್ಟು ಹೆಚ್ಚಳವಾಗಲಿದೆ.

ಹಳೆ ವಾಹನಗಳು ಗುಜರಿಗೆ
15 ವರ್ಷ ಹಳೆಯ ಪೆಟ್ರೋಲ್‌ ವಾಹನಗಳು, 10 ವರ್ಷ ಹಳೆಯ ಡೀಸೆಲ್‌ ವಾಹನಗಳನ್ನು ಫೆ.1ರಿಂದ ಜಪ್ತಿ ಮಾಡುವು ದಾಗಿ ನೋಯ್ಡಾ ಪ್ರಾಧಿಕಾರ ಘೋಷಿಸಿದೆ. ಅದರಂತೆ ನೋಯ್ಡಾ ಮತ್ತು ಗ್ರೇಟರ್‌ ನೋಯ್ಡಾದಲ್ಲಿ ಇಂಥ ವಾಹನಗಳು ರಸ್ತೆಗಿಳಿದರೆ, ಮುಟ್ಟುಗೋಲು ಹಾಕಿಕೊಂಡು ಗುಜರಿಗೆ ಹಾಕಲಾಗುತ್ತದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಹುನಿರೀಕ್ಷಿತ ಬಜೆಟ್ ಮಂಡಿಸಲಿದ್ದು, ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.

ನಿರ್ಮಲಾ ಸೀತಾರಾಮನ್ 2023 ರ ಕೇಂದ್ರ ಬಜೆಟ್ ಅನ್ನು ಇಂದು ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ.

ಇದು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷಕ್ಕೆ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿರುತ್ತದೆ. ಹಿಂದಿನ ಎರಡು ಬಜೆಟ್‌ನಂತೆ 2023-24 ರ ಕೇಂದ್ರ ಬಜೆಟ್ ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಇದಾಗಿದೆ.

ಜಾಗತಿಕ ಆರ್ಥಿಕ ಸಮಸ್ಯೆ ಎದುರಿಸುವ ಮತ್ತು ದೇಶೀಯ ಅಗತ್ಯಗಳನ್ನು ಪೂರೈಸುವ ಕಠಿಣ ಸವಾಲನ್ನು ಆರ್ಥಿಕತೆಯು ಎದುರಿಸುತ್ತಿರುವ ಸಮಯದಲ್ಲಿ ಸೀತಾರಾಮನ್ ತಮ್ಮ ಐದನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಬಜೆಟ್ಗೆ ಮುಂಚಿತವಾಗಿ ಕೈಗಾರಿಕಾ ಸಂಘಗಳು ಮತ್ತು ಆಸಕ್ತಿ ಗುಂಪುಗಳೊಂದಿಗಿನ ಚರ್ಚೆಯ ಸಮಯದಲ್ಲಿ ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ಬದಲಾವಣೆಗಳ ಬೇಡಿಕೆಯು ಒಂದು ಬೇಡಿಕೆಯಾಗಿದೆ. ಇದು ಮಧ್ಯಮ ವರ್ಗದವರಿಗೆ ಪರಿಹಾರವನ್ನು ನೀಡುತ್ತದೆ. ಅದೇ ಸಮಯದಲ್ಲಿ, ಬಡವರ ಮೇಲೆ ಸಾರ್ವಜನಿಕ ವೆಚ್ಚವನ್ನು ಹೆಚ್ಚಿಸುವುದರ ಜೊತೆಗೆ ದೇಶೀಯ ಉತ್ಪಾದನೆಯನ್ನು ಉತ್ತೇಜಿಸುವ ಕ್ರಮಗಳನ್ನು ಸಹ ಘೋಷಿಸಬಹುದು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ