ಮುಂಬೈ (ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಆಪ್ತ ಕುಂದನ್ ಶಿಂಧೆಗೆ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.
ಆದರೆ, ಶಿಂಧೆ ಅವರು ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿಯಾಗಿರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ.
ವಿಶೇಷ ನ್ಯಾಯಾಧೀಶ ಆರ್.ಎನ್. ರೋಕಡೆ ಶಿಂಧೆ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದರು. ಪ್ರಕರಣದ ಇತರ ಆರೋಪಿಗಳಲ್ಲಿ ಅನಿಲ್ ದೇಶಮುಖ್ ಮತ್ತು ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಸೇರಿದ್ದಾರೆ.
ಅನಿಲ್ ದೇಶ್ಮುಖ್ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದಾಗ, ಶಿಂಧೆ ಅವರ ಆಪ್ತ ಸಹಾಯಕರಾಗಿದ್ದರು. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 2021ರ ಜೂನ್ನಲ್ಲಿ ಶಿಂಧೆ ಅವರನ್ನು ಬಂಧಿಸಿತ್ತು.