Breaking News

ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ

Spread the love

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಹಾಲಿನ ಪುಡಿಯ ಒಟ್ಟು ಮೌಲ್ಯ 14 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಹಾಲಿನ ಪುಡಿಯನ್ನು ಧಾರವಾಡದಿಂದ ಮುಂಬೈಗೆ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ವಾಹನದ ಜೊತೆಗೆ ಚಾಲಕನನ್ನು ಸಹ ವಶಕ್ಕೆ ಪಡೆದಯಲಾಗಿದೆ.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ