Breaking News
Home / new delhi / ಚಿತ್ರನಟಿ ಖುಷ್ಬೂ  ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಚಿತ್ರನಟಿ ಖುಷ್ಬೂ  ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

Spread the love

ಹೊಸದಿಲ್ಲಿ:  ಚಿತ್ರನಟಿ ಖುಷ್ಬೂ  ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇಂದು  ರಾಜೀನಾಮೆ ನೀಡಿದ್ದಾರೆ. ಖುಷ್ಬೂ ಬಿಜೆಪಿ ಸೇರಲಿದ್ದಾರೆ ಎಂಬ  ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರೆ ಸ್ಥಾನದಿಂದ ಕೈ ಬಿಡಲಾಗಿತ್ತು.

2014ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಹೀನಾಯ ಸೋಲನುಭವಿಸಿದ ಹೊತ್ತಲ್ಲಿ ನಾನು ಕಾಂಗ್ರೆಸ್​ಗೆ ಸೇರ್ಪಡೆಯಾದೆ. ನಾನು ಯಾವುದೇ ಹಣಕಾಸಿನ ಲಾಭಕ್ಕಾಗಿ ಅಥವಾ ಖ್ಯಾತಿಗಾಗಿ ಪಕ್ಷಕ್ಕೆ ಬರಲಿಲ್ಲ. ಪಕ್ಷದೊಳಗೆ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವರು, ವಾಸ್ತವತೆ ಅಥವಾ ಸಾರ್ವಜನಿಕರೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿರದ ಜನರು ನಿಯಮಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಖುಷ್ಬೂ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯಬೇಕು ಎಂದುಕೊಂಡಿದ್ದ ನನ್ನಂಥವರನ್ನ ತುಳಿಯಲಾಗುತ್ತಿದೆ. ಹೀಗಾಗಿ ನಾನು ಬಹಳ ದಿನಗಳ ಅಲೋಚನೆಯ ಬಳಿಕ ಪಕ್ಷಕ್ಕೆ ವಿದಾಯ ಹೇಳಲು ಬಯಸುತ್ತಿದ್ದೇನೆ. ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ