ಸವದತ್ತಿ: ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸವದತ್ತಿ ಪೊಲೀಸರು ಸರಣಿ ದಾಳಿ ಮುಂದುವರಿಸಿದ್ದಾರೆ.
ವಿವಿಧೆಡೆ ದಾಳಿ ನಡೆಸಿ ಈವರೆಗೆ 5 ಪ್ರಕರಣ ದಾಖಲಿಸಿರುವ ಪೊಲೀಸರು, ಮೂವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ದಾಳಿ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ.
ಸವದತ್ತಿ ಯಲ್ಲಮ್ಮ ದೇವಸ್ಥಾನ ಸುತ್ತಮುತ್ತ ಮತ್ತು ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ ನಡೆಯುತ್ತಿದೆ ಎನ್ನುವ ದೂರು ಬಹಳ ಕಾಲದಿಂದ ಇದೆ. ಅಂದಿನ ಶಾಸಕ ಆನಂದ ಮಾಮನಿ ಅನೇಕ ಸಂದರ್ಭದಲ್ಲಿ ಬಹಿರಂಗವಾಗಿಯೇ ಈ ಕುರಿತು ಹೇಳಿಕೆ ನೀಡಿದ್ದರು