Breaking News
Home / ರಾಜಕೀಯ /  ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ 3 ಜನರ ಬಂಧನ

 ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ 3 ಜನರ ಬಂಧನ

Spread the love

ಸವದತ್ತಿ: ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸವದತ್ತಿ ಪೊಲೀಸರು ಸರಣಿ ದಾಳಿ ಮುಂದುವರಿಸಿದ್ದಾರೆ.

ವಿವಿಧೆಡೆ ದಾಳಿ ನಡೆಸಿ ಈವರೆಗೆ 5 ಪ್ರಕರಣ ದಾಖಲಿಸಿರುವ ಪೊಲೀಸರು, ಮೂವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ದಾಳಿ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ.

ಸವದತ್ತಿ ಯಲ್ಲಮ್ಮ ದೇವಸ್ಥಾನ ಸುತ್ತಮುತ್ತ ಮತ್ತು ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ ನಡೆಯುತ್ತಿದೆ ಎನ್ನುವ ದೂರು ಬಹಳ ಕಾಲದಿಂದ ಇದೆ. ಅಂದಿನ ಶಾಸಕ ಆನಂದ ಮಾಮನಿ ಅನೇಕ ಸಂದರ್ಭದಲ್ಲಿ ಬಹಿರಂಗವಾಗಿಯೇ ಈ ಕುರಿತು ಹೇಳಿಕೆ ನೀಡಿದ್ದರು


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ