Breaking News

ಬೊಮ್ಮಾಯಿ ಅವರೇ, ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳುವಿರಾ: ಕಾಂಗ್ರೆಸ್ ಟೀಕೆ

Spread the love

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಂಬರುವ ವಿಧಾನಸಭೆ ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಅಕ್ರಮ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಒಟ್ಟು ₹22,000 ಕೋಟಿ ಅಕ್ರಮ ನಡೆದಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ದೂರಿದರೂ ಸಿಎಂ ಮಾತಾಡದಿರುವುದೇಕೆ’ ಎಂದು ಟೀಕಿಸಿದೆ.

 

‘ಬೊಮ್ಮಾಯಿ ಅವರೇ, ನಿಮ್ಮ ಆಡಳಿತದಲ್ಲಿ ಯಾವುದೇ ಒಂದು ಇಲಾಖೆಯೂ ಹಗರಣ ಮುಕ್ತವಾಗಿಲ್ಲವೇಕೆ?, ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ? ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ