Breaking News

ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ: ಡಿಕೆಶಿ

Spread the love

ಮಾಲೂರು (ಕೋಲಾರ): ‘ಚಿನ್ನ, ಚಪ್ಪಲಿ ಕದಿಯೋದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ, ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಚೇರಿ ಆವರಣದಲ್ಲಿ ಶನಿವಾರ ಪ್ರಜಾಧ್ವನಿ ಯಾತ್ರೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

 

‘ಅಡುಗೆ ಅನಿಲದ ಬೆಲೆ ಹತ್ತು ಪೈಸೆ ಹೆಚ್ಚಾದಾಗ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲಿಂಡರ್‌, ಸ್ಟೌ ಇಟ್ಟುಕೊಂಡು ಓಡಾಡಿದ್ರು. ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಮೋದಿ, ‘ಮತ ಹಾಕುವಾಗ ಗ್ಯಾಸ್ ಸಿಲಿಂಡರ್‌ ಬೆಲೆ ಜ್ಞಾಪಕ ಮಾಡಿಕೊಂಡು ಮತ ಹಾಕಿ’ ಎಂದು ಹೇಳಿದ್ದರು. ಈಗ ಗ್ಯಾಸ್‌ ಸಿಲಿಂಡರ್‌, ಹಾಲು, ಬೇಳೆ, ಎಣ್ಣೆ ಬೆಲೆ ಹೆಚ್ಚಾಗಿದೆ. ಅವರೆಲ್ಲ ಏಕೆ ಸುಮ್ಮನಿದ್ದಾರೆ’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಭಗವದ್ಗೀತೆ ಜೀವನಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ : ವಿನೋದ ದೇಶಪಾಂಡೆ

Spread the love ಬೆಳಗಾವಿ : ಭಗವದ್ಗೀತೆ ಪ್ರತಿಯೊಬ್ಬರ ಜೀವನಕ್ಕೆ, ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ