Breaking News

ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ: ಚನ್ನರಾಜ ಹಟ್ಟಿಹೊಳಿ

Spread the love

ಬೆಳಗಾವಿ: ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಿಂದ ಯಾರಾದರೂ ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

 

ಅವರು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ತಾರೀಹಾಳ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕಗಳ ಸಮಾವೇಶ ಉದ್ದೇಶಿಸಿ ಮಾತನಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 15 ಸೀಟುಗಳನ್ನು ಗೆಲ್ಲಬೇಕು. ಇದು ಅನಿವಾರ್ಯವೂ ಹೌದು. ಕಾರಣ ಬೆಳಗಾವಿ ಜಿಲ್ಲೆಗೆ ಬರಬೇಕಾದ ಅನೇಕ ಯೋಜನೆಗಳನ್ನು ಬಿಜೆಪಿ ನಾಯಕರು ಹುಬ್ಬಳ್ಳಿ- ಧಾರವಾಡಕ್ಕೆ ಒಯ್ಯುತ್ತಿದ್ದು ಇದಕ್ಕೆ ತಕ್ಕ ಉತ್ತರ ನೀಡಬೇಕಾಗಿದೆ. ಸತೀಶ ಜಾರಕಿಹೊಳಿಯವರ ಕೈ ಬಲಪಡಿಸಬೇಕು ಎಂದರು.

 

 

ಬೆಲೆ ಏರಿಕೆ ಸೇರಿದಂತೆ ಪ್ರತಿ ಹಂತದಲ್ಲಿ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೂ ಪರ್ಸೆಂಟೇಜ್ ಕೊಡಬೇಕಾದ ಅನಿವಾರ್ಯತೆ ಈ ಸರಕಾರದಲ್ಲಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಆರಿಸಿ ತರಬೇಕಿದೆ ಎಂದ ಚನ್ನರಾಜ ಹಟ್ಟಿಹೊಳಿ, ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮೆಲ್ಲರ ಗೆಲುವಿಗೆ ಸತೀಶ ಜಾರಕಿಹೊಳಿ ಅವರು ಸಂಪೂರ್ಣ ಸಹಕಾರ ನೀಡಿದ್ದು ನಾವು ಮುಂಬರುವ ಚುನಾವಣೆಯಲ್ಲಿ ಅವರ ನಾಯಕತ್ವದಲ್ಲಿ ಪಕ್ಷವನ್ನು ಬಲಪಡಿಸಿ ಗೆಲ್ಲಿಸುವುದಾಗಿ ಮಾತು ಕೊಟ್ಟಿದ್ದೇವೆ. ಅದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಎಲ್ಲರೂ ಶ್ರಮಿಸಬೇಕಿದೆ ಎಂದರು.

 

 

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಅಧಿಕಾರ ಎಷ್ಟು ಮುಖ್ಯವೋ, ದೇಶ ಉಳಿಸುವುದು ಅಷ್ಟೇ ಮುಖ್ಯವಾಗಿದೆ. 9 ವರ್ಷಗಳಲ್ಲಿ ಮೋದಿ ಸರಕಾರ ಹಲವಾರು ಸುಳ್ಳು ಭರವಸೆಗಳನ್ನು ನೀಡಿ ಒಂದೂ ಭರವಸೆ ಈಡೇರಿಸಿಲ್ಲ. ಜೊತೆಗೆ ದೇಶವನ್ನು ಮಾರುವ ಹಂತಕ್ಕೆ ಒಯ್ದಿದ್ದಾರೆ. ಕಾಂಗ್ರೆಸ್ 70 ವರ್ಷಗಳಲ್ಲಿ ನಿರ್ಮಿಸಿದ ಅನೇಕ ಸಂಸ್ಥೆಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಬಿಜೆಪಿ ಸರಕಾರ ಒಂದೇ ಒಂದು ವಿಶ್ವವಿದ್ಯಾಲಯ, ಆಸ್ಪತ್ರೆ, ಹೊಸ ರೈಲು ಮಾರ್ಗ ಯಾವುದನ್ನೂ ಮಾಡಿಲ್ಲ. ಬುಲೆಟ್ ಟ್ರೇನ್ ಇನ್ನೂ ಗುಜರಾತ್ ನಿಲ್ದಾಣದಲ್ಲೇ ಇದೆ. ಅದಕ್ಕಿನ್ನೂ ಮೋದಿಯವರು ಹಸಿರು ನಿಶಾನೆ ತೋರಿಸಿಲ್ಲ ಎಂದು ಲೇವಡಿ ಮಾಡಿದರು.

ಹಿಂದುತ್ವ ಒಂದೇ ಬಿಜೆಪಿಯ ಅಜೆಂಡಾ ಆಗಿದೆ.  ಚುನಾವಣೆ ಬಂದಾಗ ಸರ್ಜಿಕಲ್ ಸ್ಟ್ರೈಕ್  ಎನ್ನುತ್ತಾರೆ. ಅದನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದೃಢಪಡಿಸಲು ಆಗಿಲ್ಲ. ಕಾಂಗ್ರೆಸ್ ಜಾರಿಗೊಳಿಸಿದ್ದ ಅನೇಕ ಜನಪರ ಕಾರ್ಯಕ್ರಮಗಳನ್ನು ಬಿಜೆಪಿ ಸ್ಥಗಿತಗೊಳಿಸಿದೆ.

ಕ್ಷೇತ್ರದ ಜನತೆ ಮೊದಲ ಬಾರಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಯಾವುದೇ ಕೆಲಸ ನೋಡದೆ ಗೆಲ್ಲಿಸಿತ್ತು. ಈಗ ಕಣ್ಣೆದುರು ಸಾಕಷ್ಟು ಕೆಲಸಗಳು ಕಾಣಸಿಗುತ್ತವೆ. ಇನ್ನು ಮುಂದೆ ಆ ಕೆಲಸಗಳೇ ಅವರನ್ನು ಗೆಲ್ಲಿಸಲಿವೆ. ನಾನು ಕ್ಷೇತ್ರಕ್ಕೆ ಹೋಗದಿದ್ದರೂ ನನ್ನನ್ನೂ ನನ್ನ ಕೆಲಸಗಳು ಗೆಲ್ಲಿಸಿವೆ. ಈ ಬಾರಿ ರಾಜ್ಯದಲ್ಲೇ ದಾಖಲೆಯ ಅಂತರದಿಂದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಗೆಲ್ಲಿಸಲು ಪಣತೊಡಿ ಎಂದರು.

ಜಿಲ್ಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕನಿಷ್ಠ 10ರಿಂದ 12 ಸೀಟುಗಳು, ರಾಜ್ಯದಲ್ಲಿ ಕನಿಷ್ಠ 120 ಸೀಟುಗಳನ್ನು ಗೆಲ್ಲಲೇಬೇಕಿದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ