Breaking News

ಅಕ್ರಮ ಆಸ್ತಿ ಸಂಪಾದನೆ ಡಿ.ಕೆ.ಶಿ.. ಮತ್ತು ಪುತ್ರಿ ಐಶ್ವರ್ಯಗೆ ಜಾರಿ ನಿರ್ದೇಶನಾಲಯ ನೋಟಿಸ್‌

Spread the love

ಶಿವಮೊಗ್ಗ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಪುತ್ರಿ ಐಶ್ವರ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ.

ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದು, ಇದೇ 22ಕ್ಕೆ ಹಾಜರಾಗುವಂತೆ ಸೂಚಿಸಿದೆ ಎಂದಿದ್ದಾರೆ.

ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿಕೆಶಿ ಅವರು, ತನಿಖಾ ಸಂಸ್ಥೆಗಳು ನಿತ್ಯವೂ ನೋಟಿಸ್‌ ನೀಡುತ್ತಿವೆ. ಮಂಗಳವಾರ ನನ್ನ ಮಗಳ ಕಾಲೇಜಿಗೆ ಹೋಗಿ ನೋಟಿಸ್‌ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿದ ಶುಲ್ಕದ ವಿವರ ಕೇಳಿದ್ದಾರೆ. ಈ ಬಗ್ಗೆ ನಾನೇನು ಹೇಳಲಿ? ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದರೆ ನನಗೆ ಹೇಗೆಲ್ಲಾ ಕಿರುಕುಳ ನೀಡುತ್ತಿದ್ದಾರೆ ಎಂಬುದನ್ನು ಆಲೋಚಿಸಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ