ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅದೃಷ್ಟಕ್ಕಾಗಿ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
1980ರಲ್ಲಿ ಕಾಂಗ್ರೆಸ್ ಸಿಂಬಲ್ ಹುಟ್ಟಿಕೊಂಡಿತ್ತು. ಹಸ್ತದ ಗುರುತು ಕಾಂಗ್ರೆಸ್ ಸಿಂಬಲ್ ಆಗಿತ್ತು. ಆ ಹಸ್ತದ ಗುರುತಿನಲ್ಲಿ ಮೂರು ಗೆರೆಗಳಿದ್ದವು.
ಮೂರು ಗೆರೆಗಳು ಸರಿಯಲ್ಲ ಎಂದು ಸಂಖ್ಯಾಶಾಸ್ತ್ರಜ್ಞರು ಸಲಹೆ ನೀಡಿದ್ದರಂತೆ. ಇದೇ ಸಮ ಸಂಖ್ಯೆ ಗೆರೆಗಳನ್ನ ಬಳಕೆ ಮಾಡಿ ಎಂದು ಸಲಹೆ ನೀಡಿಲಾಗಿತ್ತು ಎನ್ನಲಾಗಿದೆ.
ಹೀಗಾಗಿ ಸಂಖ್ಯಾಶಾಸ್ತ್ರಜ್ಙರ ಸಲಹೆಯ ಮೇರೆಗೆ ಗೆರೆಗಳಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಮೂರು ಗೆರೆಗಳ ಮಧ್ಯೆ ಅಡ್ಡ ಗೆರೆ ಎಳೆದ ಸಿಂಬಲ್ ಬಳಕೆ ಮಾಡಲಾಗಿದೆ.
ಡಿಕೆ ಶಿವಕುಮಾರ್ ಪ್ರಜಾಧ್ವನಿಯಲ್ಲಿ ಯಾತ್ರೆಯಲ್ಲಿ ಹೊಸ ಗೆರೆ ಹಸ್ತದ ಚಿಹ್ನೆ ಬಳಕೆ ಮಾಡಲಾಗಿದೆ.
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹಳೆ ಮತ್ತು ಹೊಸ ಚಿಹ್ನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಉತ್ತರ ಕರ್ನಾಟಕ ಭಾಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯುತ್ತಿದೆ. ಹಳೆ ಮೈಸೂರು ಭಾಗದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿದೆ.