Breaking News

ಮಹದಾಯಿ ಯೋಜನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯಿರಿ: ಕೇಂದ್ರದ ಮೇಲೆ ಹಲವು ಸಂಘಟನೆಗಳಿಂದ ಒತ್ತಡ

Spread the love

ಳಸಾ-ಬಂಡೂರಿ ಡಿಪಿಆರ್ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ. ಬೆಳಗಾವಿ: ಕಳಸಾ-ಬಂಡೂರಿ ಡಿಪಿಆರ್ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ.
ಮಹದಾಯಿ ಉಳಿಸಿ, ಗೋವಾ ಉಳಿಸಿ ನಿಯೋಗವು ಬುಧವಾರ ಗೋವಾದಲ್ಲಿ ಗೋವಾ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ ಅವರನ್ನು ಭೇಟಿ ಮಾಡಿತು, ಮಹದಾಯಿ ವಿವಾದದಲ್ಲಿ ತುರ್ತು ಮಧ್ಯಪ್ರವೇಶಿಸುವಂತೆ ಮನವಿ ಮಾಡಿಕೊಂಡಿತು. ಮಹದಾಯಿ ನೀರು ಹಂಚಿಕೆ ಸಮಸ್ಯೆಗೆ ಪರಿಹಾರ ನೀಡುವಂತೆ ಹಾಗೂ ಗೋವಾ ರಾಜ್ಯದ ಪರವಾಗಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಹಿಡಿಯುವಂತೆ ಗೋವಾ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
“ಜನವರಿ 16 ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ನಾವು ಕೆಲವು ನಿರ್ಣಯಗಳನ್ನು ಅಂಗೀಕರಿಸಿದ್ದೇವೆ. ಈ ನಿರ್ಣಯಗಳ ಪ್ರತಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇವೆ ಮತ್ತು ಅದನ್ನು ರಾಷ್ಟ್ರಪತಿಗಳ ಮುಂದಿಡುವಂತೆ ಮನವಿಯನ್ನೂ ಮಾಡಿಕೊಂಡಿದ್ದೇವೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ