Breaking News

ಪ್ರಹ್ಲಾದ್ ಜೋಶಿ ಕಚೇರಿಯಲ್ಲಿ ಲಂಚ ಸ್ವೀಕಾರ ಆರೋಪ ಮಾಡಿದ ಜೆಡಿಎಸ್: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಕೇಂದ್ರ ಸಚಿವ

Spread the love

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಎಂಎಲ್ ಸಿ ಎಸ್‌ಎಲ್,ಭೋಜೇಗೌಡ ಅವರು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎನ್‌ಎಂಸಿ ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಚೇರಿಯಲ್ಲಿ ಲಂಚ ಪಡೆಯಲಾಗಿದೆ. ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಅಯ್ಯಣ್ಣ ಎಂಬುವವರನ್ನು ಎನ್‌ಎಂಸಿ ಸದಸ್ಯರನ್ನಾಗಿ ನೇಮಿಸುವುದಕ್ಕಾಗಿ ಪ್ರಲ್ಹಾದ ಜೋಶಿಯವರ ಕಚೇರಿಯ ಸಿಬ್ಬಂದಿಗೆ 2.5 ಕೋಟಿ ಲಂಚ ನೀಡಿದ್ದಾರೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.

ಎರಡು ಬಾರಿ ನಿರ್ದಿಷ್ಟ ಬ್ಯಾಂಕ್ ಖಾತೆಗೆ 2.5 ಕೋಟಿ ರೂ. ವರ್ಗಾವಣೆಯಾಗಿದ್ದು, 2021ರ ಜುಲೈನಲ್ಲಿ 2 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಉಳಿದ 50 ಲಕ್ಷ ರೂ.

ನಗದು ರೂಪದಲ್ಲಿ ನೀಡಲಾಗಿದೆ. ಹಣ ವರ್ಗಾವಣೆ, ಶಿಫಾರಸು ಪತ್ರ, ಹಣ ಯಾರಿಗೆ ಸಿಕ್ಕಿದೆ ಎಂಬುದಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಯಬೇಕಿದೆ ಎಂದು ಒತ್ತಾಯಿಸಿದರು. ಇದೇ ವೇಳೆ ಹರೀಶ್ ಅಯ್ಯಣ್ಣ ಅವರನ್ನು ಎನ್‌ಎಂಸಿ ಸದಸ್ಯರನ್ನಾಗಿ ನೇಮಕ ಮಾಡಬೇಕೆಂಬ ಕೋರಿಕೆಯನ್ನು ಪರಿಗಣಿಸುವುದಾಗಿ ಆಗ ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್ ಅವರು ಪ್ರಲ್ಹಾದ ಜೋಶಿಯವರಿಗೆ ಪತ್ರವನ್ನೂ ಬರೆದಿದ್ದರು ಎಂದು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಕೇಂದ್ರ ಸಚಿವರ ಪತ್ರಗಳನ್ನು ತೋರಿಸಿದರು.


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ