Breaking News

ರೈತನ ಮಗನಾಗಿ ಭಾರೀ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ: ಅಕ್ರಮ ಎಸಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ?

Spread the love

ರೈತನ ಮಗನಾಗಿದ್ದುಕೊಂಡು ಕೊತ್ವಾಲ್ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ. ಬೆಂಗಳೂರು: ರೈತನ ಮಗನಾಗಿದ್ದುಕೊಂಡು ಕೊತ್ವಾಲ್ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ.
ಆದರೆ ಆ ಬಗ್ಗೆ ಜಾರಿ ನಿರ್ದೇಶನಾಲಯ ತಿಳಿಯಲು ಹೊರಟಾಗ ಮಾತ್ರ ಅವರಿಗೆ ಆತಂಕ ಉಂಟಾಗುತ್ತದೆ ಎಂದು ಬಿಜೆಪಿ ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ತಾವು ಪ್ರಜಾದ್ರೋಹ ಯಾತ್ರೆ ಮಾಡಬೇಕೋ ಅಥವಾ ವಿಚಾರಣೆ ಎದುರಿಸಬೇಕೋ ಎಂಬುದನ್ನು ಡಿ.ಕೆ ಶಿವಕುಮಾರ್ ಅವರೇ ನಿರ್ಧರಿಸಬೇಕು.

ಯಾತ್ರೆ ಹೆಸರಲ್ಲಿ ಹಿಂದೆ ಮಾಡಿದ ಪ್ರಜಾದ್ರೋಹದ ವಿಚಾರಣೆಯಿಂದ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನವನ್ನು ಅವರು ಮಾಡಬಾರದು ಎಂದು ಲೇವಡಿ ಮಾಡಿದೆ. ಈಗ ವಿಚಾರಣೆ ಬಗ್ಗೆ ನೀವು ಕಿಡಿಕಾರುತ್ತಿದ್ದೀರಿ.

ಆದರೆ, ಅಕ್ರಮ ಎಸೆಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ ನಿಮ್ಮ ಈಗಿನ ಪರಿಸ್ಥಿತಿಗೆ ಕಾರಣ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ನಮ್ಮ ವಿರುದ್ಧ ಟೀಕೆ ನಿಲ್ಲಿಸಿ ಎಂದು ಬಿಜೆಪಿ ಸಲಹೆ ನೀಡಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ