Breaking News

ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆರಮೇಶ್ ಜಾರಕಿಹೊಳಿ‌ ಅವರಿಗೆ ಮನವಿ

Spread the love

ಬೆಂಗಳೂರು:  ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರರಾದ (ನಿವೃತ್ತ) ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರಿಗೆ ಮನವಿ ಮಾಡಿದರು.

ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರ ವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 ದಶಕಗಳ ಕಾಲ ರಾಜಾರಾವ್ ಅವರು ಸಲ್ಲಿಸಿರುವ ಸೇವೆ ನಮಗೆಲ್ಲ ಮಾದರಿ. ಹಾಗಾಗಿ ಈ ಕೂಡಲೇ ಮುಖ್ಯಮಂತ್ರಿಗಳಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಈ ಕುರಿತು ಮಾತನಾಡಿ, ತಾಂತ್ರಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗಮನಿಸಿ ಕ್ಯಾಪ್ಟನ್ ಎಸ್. ರಾಜಾರಾವ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಶಿಫಾರಸ್ಸು ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ