Breaking News

ವಿಧಾನಸೌಧಕ್ಕೆ ಪೇಶ್ವೆ ನಾಯಕ; ಬಿಜೆಪಿ ಉತ್ತರಿಸಲಿ -ಕುಮಾರಸ್ವಾಮಿ

Spread the love

ಬೆಂಗಳೂರು: ‘ವಿಧಾನಸೌಧದಲ್ಲಿ ಪೇಶ್ವೆ ವಂಶದ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ಬಿಜೆಪಿ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು, ತಾಕತ್ತು ತೋರಿಸುತ್ತಿಲ್ಲ ಏಕೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

 

ಸರಣಿ ಟ್ವೀಟ್‌ ಮಾಡಿ, ‘ಶೃಂಗೇರಿ ಮಠದ ಮೇಲೆ ದಾಳಿ ನಡೆಸಿದ್ದ ಪೇಶ್ವೆಗಳ ವಂಶದ ವ್ಯಕ್ತಿಯನ್ನು ಸಿ.ಎಂ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂಬ ನನ್ನ ಹೇಳಿಕೆಯಲ್ಲಿ ಗೊಂದಲವಿಲ್ಲ, ಬ್ರಾಹ್ಮಣ ಸಮೂಹವನ್ನು ನಿಂದಿಸಿಲ್ಲ. ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಬಿಜೆಪಿಯವರಿಗೂ ಚೆನ್ನಾಗಿ ಗೊತ್ತು’ ಎಂದಿದ್ದಾರೆ. ‘ಹೇಳಿಕೆಯನ್ನು ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿದ್ದಾರೆ. ಬಸವೇಶ್ವರರು, ಬುದ್ಧ,ಶಿವಾಜಿ, ಗಾಂಧೀಜಿ ಮತ್ತು ಅಂಬೇಡ್ಕರ್ ಅವರನ್ನೇ ಇವರು ಬಿಟ್ಟಿಲ್ಲ. ನನ್ನನ್ನು ಬಿಡುತ್ತಾರೆಯೇ?’ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ