Breaking News

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ

Spread the love

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತವರ ಕುಟುಂಬದ ಸದಸ್ಯರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ.

ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯು ನ್ಯಾ| ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದು, ಪ್ರಕರಣದ ತನಿಖೆಗೆ ಫೆ.24ರವರೆಗೆ ತಡೆ ನೀಡಿತು.

ಅಲ್ಲದೆ, ಈವರೆಗಿನ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ