Breaking News

ಲಿಂಗಾಯತ ‘ಸ್ವತಂತ್ರ ಧರ್ಮ’ ಬೆಂಬಲಿಸುವ ಪಕ್ಷಕ್ಕೆ ಮತ: ಚನ್ನಬಸವಾನಂದ ಸ್ವಾಮೀಜಿ

Spread the love

ಹುಬ್ಬಳ್ಳಿ: ‘ಲಿಂಗಾಯತ ಸ್ವತಂತ್ರ ಧರ್ಮವಾಗಲು ಕೇಂದ್ರಕ್ಕೆ ಶಿಫಾರಸು ಸಲ್ಲಿಸುವುದಾಗಿ ಪ್ರಣಾಳಿಕೆಯಲ್ಲಿ ದಾಖಲಿಸುವ ಪಕ್ಷಕ್ಕೆ ಮತ ಹಾಕುತ್ತೇವೆ’ ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಹೇಳಿದರು.

 

ಶನಿವಾರ ಪತ್ರಿಕಾಗೋಷ್ಠಿಯಲ್ಲಿ, ‘ವೀರಶೈವ ಲಿಂಗಾಯತರು ಮಹಾರಾಷ್ಟ್ರದಲ್ಲಿ ಹೋಗಿ ತಾವು ‘ಹಿಂದೂಗಳು’ ಎಂದು ಹೇಳಿಕೊಳ್ಳುತ್ತಾರೆ. ಆದರೆ ನಾವು ಹಿಂದೂಗಳಲ್ಲ’ ಹಿಂದೂ ಎಂಬುದು ಧರ್ಮ ಅಲ್ಲ, ಜೀವನಶೈಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಪ್ರಧಾನಿ ಮೋದಿಯವರೂ ಹೇಳಿದ್ದಾರೆ. 500 ವರ್ಷಗಳ ಇತಿಹಾಸ ಇರುವ ಸಿಖ್ ಸಮಾಜ ಪ್ರತ್ಯೇಕ ಧರ್ಮ ಎನಿಸಿಕೊಂಡಿದೆ. ಜೈನರದ್ದೂ ಪ್ರತ್ಯೇಕ ಧರ್ಮ ಆಗಿರುವಾಗ 900 ವರ್ಷಗಳ ಹಿಂದಿನ ಲಿಂಗಾಯತ ಸಮುದಾಯ ಏಕೆ ಸ್ವತಂತ್ರ ಧರ್ಮ ಆಗಬಾರದು ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ