ನವದೆಹಲಿ: ರಕ್ಷಾ ಬಂಧನದ ಸಮಯದಲ್ಲಿ ಚೀನಾಗೆ ತಿರುಗೇಟು ನೀಡಿದ್ದ ಭಾರತ ಈಗ ದೀಪಾವಳಿ ಸಮಯದಲ್ಲೂ ಆರ್ಥಿಕವಾಗಿ ಹೊಡೆತ ನೀಡಲು ಮುಂದಾಗುತ್ತಿದೆ.
ಈ ವರ್ಷದ ದೀಪಾವಳಿಗೆ 33 ಕೋಟಿ ಪರಿಸರ ಸ್ನೇಹಿ ಹಣತೆ ಮಾರುಕಟ್ಟೆಗೆ ಬರಲಿದೆ. ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಈ ವಿಚಾರವನ್ನು ತಿಳಿಸಿದ್ದು, ಮುಂದಿನ ತಿಂಗಳು 33 ಕೋಟಿ ಪರಿಸರ ಸ್ನೇಹಿ ಹಣತೆಗಳು ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿದ್ದಾರೆ.
ವದೇಶಿ ಉತ್ಪನ್ನಗಳ ರಕ್ಷಣೆ ಮತ್ತು ಉತ್ತೇಜನಕ್ಕೆ ಈ ಆಯೋಗವನ್ನು 2019ರಲ್ಲಿ ಸ್ಥಾಪನೆ ಮಾಡಲಾಗಿದೆ. ಈಗ ದೇಶದೆಲ್ಲೆಡೆ ಸಗಣಿಯಿಂದ ತಯಾರಾದ ಉತ್ಪನ್ನಗಳನ್ನು ಉತ್ತೇಜಿಸಲು ಆಯೋಗ ಮುಂದಾಗುತ್ತಿದೆ.
ಚೀನಾದಲ್ಲಿ ತಯಾರಾದ ಹಣತೆಯನ್ನು ಈ ಬಾರಿ ತಿರಸ್ಕರಿಸಿ ಮೇಕ್ ಇನ್ ಇಂಡಿಯಾ ಅಭಿಯಾನದಲ್ಲಿ ತಯಾರಾಗಿರುವ ಹಣತೆಯನ್ನು ಬಳಸಬೇಕು. ಈ ಮೂಲಕ ದೇಶದ ಗ್ರಾಮೀಣ ಜನರ ಕೆಲಸವನ್ನು ಪ್ರೋತ್ಸಾಹಿಸಬೇಕು ಎಂದು ಜನರಲ್ಲಿ ಆಯೋಗ ಕೇಳಿಕೊಂಡಿದೆ.