Breaking News

ಕುಮಾರಸ್ವಾಮಿ ಸೂಚಿಸಿದ ಕಡೆ ಭವಾನಿ ಸ್ಪರ್ಧಿಸುತ್ತಾರೆ: ಎಚ್‌.ಡಿ.ರೇವಣ್ಣ

Spread the love

ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಕುಟುಂಬದಲ್ಲಿ ಒಡಕಿಲ್ಲ. ಶಾಸಕಾಂಗ ಪಕ್ಷದ ನಾಯಕ
ಎಚ್‌.ಡಿ. ಕುಮಾರಸ್ವಾಮಿ ಅವರು ಸೂಚಿಸುವ ಕ್ಷೇತ್ರದಿಂದಲೇ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ’ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

 

ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಗೊಂಡನಹಳ್ಳಿಯಲ್ಲಿ ಶನಿವಾರ ನಡೆದ ಹಳ್ಳಿಕಾರ ಮಠ ಸಮರ್ಪಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಭವಾನಿ ರೇವಣ್ಣ ಅವರ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಭವಾನಿ ಅಷ್ಟೇ ಏಕೆ ಪಕ್ಷದ ಎಲ್ಲರೂ ಕುಮಾರಸ್ವಾಮಿ ಅವರ ಸೂಚಿಸಿದ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಕುಟುಂಬ ರಾಜಕಾರಣ ಕುರಿತ ಪ್ರಶ್ನೆಗೆ, ‘ನಾಳೆಯೇ ನಾನು ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ರಾಜೀನಾಮೆ ಕೊಡಿಸುತ್ತೇನೆ. ರಾಷ್ಟ್ರೀಯ ಪಕ್ಷಗಳ ರಾಜಕಾರಣಿಗಳು ತಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದನ್ನು ನಿಲ್ಲಿಸುತ್ತಾರಾ? ಎಂದು ಸವಾಲೆಸೆದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ