Breaking News

ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ನಜೀರ್

Spread the love

ಬೆಂಗಳೂರು: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

ಎಸ್. ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

 

‘ನೂತನವಾಗಿ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್‌. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ