Breaking News

ಕ್ರೂಜರ್, ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ

Spread the love

ರಾಮದುರ್ಗ: ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ಬಳಿ ಕ್ರೂಜರ್ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಭಾಗ್ಯ ನಗರದ ಮಾಲಿಂಗ ನಂದಪ್ಪ ಆಚಮಟ್ಟಿ (25) ಹಾಗೂ ಬಸವನ ಬಾಗೇವಾಡಿಯ ರಫಿಕ್ ಚಲವಾದಿ (20) ಮೃತ ಪಟ್ಟವರು.

ಗಂಭೀರ ಗಾಯಗೊಂಡಿರುವ ಆಶ್ರಯ ಪ್ಲಾಟ್ ನಿವಾಸಿ ಯುನೂಸ್ ಮಹ್ಮದ್‌ ಪಟೇಲ್ (25) ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ಸಾಗಿಸಿದ್ದು, ಭಾಗ್ಯ ನಗರದ ಮಾರುತಿ ಬಂಡಿವಡ್ಡರ (20) ಅವರನ್ನು ರಾಮದುರ್ಗ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದ ನಾಲ್ವರೂ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ಕಟ್ಟಡ ನಿರ್ಮಾಣ ಕೆಲಸ ಮುಗಿಸಿ ರಾಮದುರ್ಗದತ್ತ ಬರುತ್ತಿದ್ದ ವೇಳೆ ರಾಮದುರ್ಗದಿಂದ ಶಿರಸಂಗಿ ಕಡೆಗೆ ಹೊರಟಿದ ಕ್ರೂಜರ್ ಡಿಕ್ಕಿ ಹೊಡೆಯಿತು.

ಈ ಕುರಿತು ರಾಮದುರ್ಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ