Breaking News
Home / ಜಿಲ್ಲೆ / ಬೆಳಗಾವಿ / ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ

ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ

Spread the love

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಇದಕ್ಕಾಗಿ ಈ ಭಾಗದ ಶಾಸಕರು, ಸಚಿವರು ಮುಖ್ಯಮಂತ್ರಿಗಳ ಮನವಿ ಮಾಡಬೇಕು ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆ, ನಾಡಿಗೆ ನೀಡಿದ ಕೊಡುಗೆಗಳು ಶ್ಲಾಘನಾರ್ಹ ಎಂದಿದ್ದಾರೆ.

ಉತ್ತರ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಿಸುವುದರಿಂದಿಗೆ ಮುಖ್ಯಮಂತ್ರಿಗಳು ಈ ಭಾಗದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸಮಾಧಾನಕರವಾಗಿವೆ. ಆದರೆ ಕಿತ್ತೂರ ಕರ್ನಾಟಕದ ಪರಿಪೂರ್ಣ ಅಭಿವೃದ್ಧಿಗೆ ಸರಕಾರದ ಕೊಡುಗೆ ಸಾಲದು. ಬರುವ ಬಜೆಟ್ ನಲ್ಲಿ ಹಲವಾರು ವರ್ಷಗಳಿಂದ ನನೆಗುದ್ದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸುವತ್ತ ಬೊಮ್ಮಾಯಿ ಸರಕಾರ ಗಮನ ಹರಿಸಬೇಕು. ಅಲ್ಲದೆ, ಬರುವ ಬಜೆಟ್ ನಲ್ಲಿ ಕಿತ್ತೂರು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಹಳೆಯ ಯೋಜನೆಗಳ ಜೊತೆಗೆ ಹೊಸ ಯೋಜನೆಗಳನ್ನು ಘೋಷಿಸುವ ಕೆಲಸವಾಗಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಸಂವಿಧಾನದ ಆಶಯಕ್ಕೆ ಬದ್ಧರಾಗಿ’

Spread the love ಅಥಣಿ: ‘ಡಾ.ಅಂಬೇಡ್ಕರ್ ನೇತೃತ್ವದ ತಂಡ ನೀಡಿರುವ ಸಂವಿಧಾನ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಈ ಸಂವಿಧಾನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ