Home / ರಾಜಕೀಯ / ಕಾಂಗ್ರೆಸ್ ಪಕ್ಷ ಸೇರದ ಕಾರಣ ಸಿಬಿಐ ನನ್ನನ್ನು ಬಂಧಿಸಿತ್ತು ಎಂದು ಹೊಸ ಬಾಂಬ್ ಸಿಡಿಸಿದಜನಾರ್ದನ ರೆಡ್ಡಿ

ಕಾಂಗ್ರೆಸ್ ಪಕ್ಷ ಸೇರದ ಕಾರಣ ಸಿಬಿಐ ನನ್ನನ್ನು ಬಂಧಿಸಿತ್ತು ಎಂದು ಹೊಸ ಬಾಂಬ್ ಸಿಡಿಸಿದಜನಾರ್ದನ ರೆಡ್ಡಿ

Spread the love

ಕೊಪ್ಪಳ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಸಿಬಿಐ ತಮ್ಮನ್ನು ಬಂಧಿಸಿದ ರಹಸ್ಯ ಬಿಚ್ಚಿಟ್ಟಿದ್ದಾರೆ. ಸಿಬಿಐ ಮೂಲಕ ಕಾಂಗ್ರೆಸ್ ಸೇರಲು ತಮಗೆ ಆಹ್ವಾನ ನೀಡಲಾಗಿತ್ತು ಎಂದು ಹೇಳಿದ್ದಾರೆ.

 

ಗಂಗಾವತಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಸಿಬಿಐ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದು, ಆದರೆ, ಸುಷ್ಮಾ ಸ್ವರಾಜ್ ಅವರು ನನ್ನ ಮೇಲೆ ಇಟ್ಟಿದ್ದ ನಂಬಿಕೆಯನ್ನು ಕಳೆದುಕೊಳ್ಳಲು ನನಗೆ ಇಷ್ಟ ಇರಲಿಲ್ಲ. ಹೀಗಾಗಿ ನನ್ನನ್ನು ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರದ ಕಾರಣ ಸಿಬಿಐ ನನ್ನನ್ನು ಬಂಧಿಸಿತ್ತು ಎಂದು ಆರೋಪ ಮಾಡಿದ ಅವರು ವಿಧಾನಸಭೆ ಚುನಾವಣೆ ಹೊತ್ತಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ