ಪಣಜಿ: ಆಯೋಗ ನೀಡಿರುವ ಡಿಪಿಆರ್ ಅನುಮೋದನೆಯನ್ನು ಹಿಂಪಡೆಯುವಂತೆ ಹಾಗೂ ಕೂಡಲೇ ಜಲ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿದ್ದು,”ಅಗತ್ಯ ಪರವಾನಿಗೆ ಪಡೆಯದೆ ಕರ್ನಾಟಕ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು ಹಾಗೂ ಜಲ ಆಯೋಗವು ಡಿಪಿಆರ್ ಪ್ರತಿಯನ್ನು ಗೋವಾ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ತೀರ್ಪು ನೀಡಿದೆ.
ಕರ್ನಾಟಕಕ್ಕೆ ಕಳುಹಿಸಿದ ಶೋಕಾಸ್ ನೋಟಿಸ್ ಕುರಿತು ತೀರ್ಮಾನಿಸುವಂತೆ ಗೋವಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಹೇಳಿದೆ.