ಬೆಳಗಾವಿ: ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್ ಪಾಟೀಲ ಹಾಗೂ ಶಂಭುರಾಜ್ ದೇಸಾಯಿ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಮಂಗಳವಾರ ಭೇಟಿಯಾದರು.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆಳವಣಿಗೆಗಳು ಹಾಗೂ ಫೆ.28ರಂದು ಎಂಇಎಸ್ನಿಂದ ಆಯೋಜಿಸಿರುವ ಮುಂಬೈ
ಚಲೋ ಹೋರಾಟದ ಕುರಿತು ಚರ್ಚಿಸಿದರು.
ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶಕುಮಾರ್, ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ್ ಕಿಣೇಕರ್ ಇತರರಿದ್ದರು.