Breaking News

ಜಾಕ್‌ವೆಲ್‌ ಮುತ್ತಿಗೆ ಯತ್ನ: ಲಘು ಲಾಠಿ ಪ್ರಹಾರ

Spread the love

ವದತ್ತಿ: ಬಾಕಿ ವೇತನ ಹಾಗೂ ನೇಮಕಾತಿ ಆದೇಶ ನೀಡಲು ಆಗ್ರಹಿಸಿ ಧಾರವಾಡದ ಜಲಮಂಡಳಿಯ ದಿನಗೂಲಿ ಕಾರ್ಮಿಕರು ಪಟ್ಟಣದಲ್ಲಿ ಬುಧವಾರ ನಡೆಸಿದ ಧರಣಿ ವೇಳೆ, ನೂಕಾಟ- ತಳ್ಳಾಟ ನಡೆದಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಈ ಸಂದರ್ಭದಲ್ಲಿ 12 ಮಂದಿಗೆ ಸಣ್ಣಪುಟ್ಟ ಗಾಯಗಳಾದವು.

 

ಹುಬ್ಬಳಿ- ಧಾರವಾಡ ನಗರಗಳಿಗೆ ನೀರು ಸರಬರಾಜು ಮಾಡುವ ಇಲ್ಲಿನ ಜಾಕ್‌ವೆಲ್ ಬಳಿ ಬೆಳಿಗ್ಗೆಯಿಂದ ಶಾಂತಿಯುತ ಧರಣಿ ನಡೆಸಲಾಯಿತು. ಮಧ್ಯಾಹ್ನದವರೆಗೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ, ಕೋಪಗೊಂಡ ಪ್ರತಿಭಟನಾಕಾರರು ಜಾಕ್‌ವೆಲ್‌ಗೆ ನುಗ್ಗಿ ನೀರು ಸ್ಥಗಿತಗೊಳಿಸಲು ಮುಂದಾದರು. ಈ ವೇಳೆ ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಎಳೆದಾಡಿದರು. ಅಡ್ಡ ಬಂದ ಸಿಪಿಐ ಅವರನ್ನೂ ಕೆಳಕ್ಕೆ ತಳ್ಳಿದರು. ಆಗ ಹೋರಾಟಗಾರರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

ಇದರಿಂದ ಹೋರಾಟಗಾರರು ಚೆಲ್ಲಾಪಿಲ್ಲಿಯಾಗಿ ಹೋದರು. ಗಾಯಗೊಂಡ 12 ಮಂದಿ ಇಲ್ಲಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ