Breaking News

ಬಿಜೆಪಿ ಮತ್ತೆ ಅಧಿಕಾರಕ್ಕೇರಿದರೆ ಸಿವಿಲ್ ವಾರ್ ಶುರು

Spread the love

ಹುಬ್ಬಳ್ಳಿ: ಬಿಜೆಪಿಯನ್ನು ಸೋಲಿಸುವುದೊಂದೇ ನಮ್ಮ ಗುರಿಯಾಗಬೇಕು. ಈ ಸಲ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ (ನಾಗರಿಕ ದಂಗೆ) ಶುರುವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿ ಕೊಂಡ ನಂತರ ಮಾತನಾಡಿದರು.

 

ನೀವು ಜೆಡಿಎಸ್ ಬಿಟ್ಟು ಬಂದಿದ್ದು ಒಳ್ಳೆಯದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಹೇಳಿದರು.

ಹೊಡಿ, ಬಡಿ, ಕಡಿ ಎನ್ನುವ ಮೂಲಕ ದೇಶದಲ್ಲಿ ಬಿಜೆಪಿಯವರು ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಸಾಮರಸ್ಯ ಹಾಳುಗೆಡವಿ ಅಶಾಂತಿ ಮೂಡಿಸುವುದೇ ಅವರ ಉದ್ದೇಶ. ದ್ವೇಷ ಕಕ್ಕುವ ಇಂತಹವರು ಇರಬೇಕಾ? ಎಂದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ