Breaking News

ಕೊನೆಯದಾಗಿ ಸ್ವೀಕರಿಸಿದ್ದ ಕರೆ ಆಧರಿಸಿ ಆರೋಪಿತರನ್ನುಬಂಧಿಸಿದ್ ಪೊಲೀಸರು

Spread the love

ಗೋಕಾಕ: ಇಲ್ಲಿನ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿದಂತೆ ಮೂವರು ಆರೋಪಿತರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಪ್ರಥಮ ಆರೋಪಿ ಗೋಕಾಕ ಚನ್ನಮ್ಮನಗರ ನಿವಾಸಿ ಸಚಿನ್ ಶಂಕರ್ ಶಿರಗಾವೆ(36), ಎರಡನೇ ಆರೋಪಿ ಸಿಟಿ ಆಸ್ಪತ್ರೆ ವೈದ್ಯ, ಹುಕ್ಕೇರಿ ತಾಲೂಕು ಶಿರಢಾಣ ಸಮೂಲದ  ಡಾ. ಶಿವಾನಂದ ಕಾಡಗೌಡ ಪಾಟೀಲ (28) ಹಾಗೂ ರೆಫ್ರಿಜರೇಟರ್ ರಿಪೇರಿ ಕೆಲಸ ಮಾಡಿಕೊಂಡಿದ್ದ ಶಾಪಥ್ ಇರ್ಷಾದ್ ತ್ರಾಸಗರ(25) ಬಂಧಿತರು.

ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿಂತೆ ಉಂಟಾಗಿದ್ದ ವೈಮನಸ್ಯದಿಂದ ರಾಜು ಅವರ ಮಿತ್ರ ಹಾಗೂ ವ್ಯವಹಾರದ ಪಾಲುದಾರನಾಗಿದ್ದ ಡಾ. ಸಚಿನ್ ಫೆ.10ರಂದು ರಾಜು ಅವರನ್ನು ಮೊಬೈಲ್ ಕರೆ ಮಾಡಿ ಕರೆಸಿದ್ದ. ನಂತರದಲ್ಲಿ ರಾಜು ಅವರು ನಾಪತ್ತೆಯಾಗಿದ್ದು ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಪೊಲೀಸರು ತನಿಖೆ ಕೈಗೊಂಡಾಗ ರಾಜು ಅವರು ಕೊನೆಯದಾಗಿ ಸ್ವೀಕರಿಸಿದ್ದ ಕರೆ
ಆಧರಿಸಿ ಡಾ. ಸಚಿನ್ ನನ್ನು ಬಂಧಿಸಿದ್ದರು. ಗುರುವಾರ ರಾತ್ರಿ ರಾಜು ಅವರ ಶವ ಪತ್ತೆಯಾಗಿದ್ದು ಈವರೆಗೆ ಮೂವರು ಆರೋಪಿತರನ್ನು ಬಂಧಿಸಿದಂತಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ