Breaking News
Home / ಜಿಲ್ಲೆ / ಬಾಗಲಕೋಟೆ / ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್

ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್

Spread the love

ಬಾಗಲಕೋಟೆ : ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ, ನಿಮ್ಮ ಅಕ್ಕ -ತಂಗಿ ರಕ್ಷಣೆಗಾಗಿ ಹಾಗೂ ಗೋ ಮಾತೆ ರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

 

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಹರಿತವಾದ ತಲವಾರ್ ಇಟ್ಟುಕೊಳ್ಳಬೇಕು, ದುರ್ಗಾದೇವಿ ಕೈಯಲ್ಲಿ ಆಯುಧವಿದೆ. ಹಾಗಾದ್ರೆ ದುರ್ಗಾ ಮಾತೆಯನ್ನು ಅರೆಸ್ಟ್ ಮಾಡಲಿ

. ಹನುಮನ ಕೈಯಲ್ಲಿ ಗಧೆ ಇದೆ ಹಾಗಾದರೆ ಹನುಮನನ್ನು ಅರೆಸ್ಟ್ ಮಾಡಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ ಹಾಗಾದ್ರೆ ಈಶ್ವರನನ್ನು ಅರೆಸ್ಟ್ ಮಾಡಲಿ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದು, ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ.

 

ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಮಾತನಾಡಿದ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗರ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ. ನಿಮಗೆ ರಕ್ಷಣೆ, ಉದ್ಯೋಗ ನೀಡುತ್ತೇವೆ ಎಂದು ಕರೆ ನೀಡಿದ್ದಾರೆ.

ಪ್ರತಿಯೊಬ್ಬ ಹಿಂದೂ ಮನೆಯಲ್ಲ ಹರಿತವಾದ ತಲವಾರ್ ಇಟ್ಟುಕೊಳ್ಳಬೇಕು, ಹನುಮನ ಕೈಯಲ್ಲಿ ಗಧೆ ಇದೆ ಹಾಗಾದರೆ ಹನುಮನನ್ನು ಅರೆಸ್ಟ್ ಮಾಡಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ ಹಾಗಾದ್ರೆ ಈಶ್ವರನನ್ನು ಅರೆಸ್ಟ್ ಮಾಡಲಿ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸದಾ ಒಂದಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಪ್ರಮೋದ್ ಮುತಾಶಿವಾಜಿ ಜಯಂತಿ ಆಚರಣೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ


Spread the love

About Laxminews 24x7

Check Also

ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

Spread the love ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ