Breaking News
Home / ರಾಜ್ಯ / ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್‌ ವಿಧಿವಶ

ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್‌ ವಿಧಿವಶ

Spread the love

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಶ್ರಿನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್‌ ಸೋಮವಾರ (ಫೆ.20 ರಂದು) ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

1966 ರಲ್ಲಿ ಬಂದ ʼಸಂಧ್ಯಾರಾಗʼ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಿರ್ದೇಶಕರಾಗಿ ಕನ್ನಡದಲ್ಲಿ ʼಕಸ್ತೂರಿ ನಿವಾಸʼ, ʼಎರಡು ಕನಸುʼ, ʼಬಯಲು ದಾರಿʼ, ʼಜೀವನ ಚೈತ್ರʼ,ʼಗಾಳಿ ಮಾತುʼ, ʼಹೊಸ ಬೆಳಕುʼ, ʼಆಪರೇಷನ್‌ ಡೈಮಂಡ್‌ ರಾಕೆಟ್‌ʼ, ʼಜೇಡರ ಬಲೆʼ, ʼಗೋವಾದಲ್ಲಿ ಸಿಐಡಿ999ʼ, ಹೀಗೆ ಅನೇಕ ಚಿತ್ರಗಳನ್ನು ಮಾಡಿ ಸೂಪರ್‌ ಹಿಟ್‌ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು. ಡಾ. ರಾಜ್ ಕುಮಾರ್‌ ಅವರೊಂದಿಗೆ ಬಂದ ಭಗವಾನ್‌ ಅವರ ಸಿನಿಮಾಗಳು ಆ ಕಾಲದಲ್ಲಿ ಮೋಡಿ ಮಾಡಿತ್ತು. 2019 ರಲ್ಲಿ ಸಂಚಾರಿ ವಿಜಯ್‌ ಅವರ ʼಆಡುವ ಗೊಂಬೆʼ ಚಿತ್ರವನ್ನು ನಿರ್ದೇಶನ ಮಾಡಿದ್ದರು.

ನಿರ್ದೇಶಕ ದೊರೈರಾಜ್‌ ಜೊತೆಗೂಡಿ ಅನೇಕ ಚಿತ್ರಗಳಿಗೆ ಆಯಕ್ಷನ್ ಕಟ್‌ ಹೇಳಿದ್ದರು. ದೊರೈ – ಭಗವಾನ್‌ ಎಂದೇ ಇವರು ಖ್ಯಾತಿಯಾಗಿದ್ದರು.

ಬೆಂಗಳೂರಿನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

Spread the love ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ