Breaking News

ರೂಪಾ-ರೋಹಿಣಿ ಕಿತ್ತಾಟದಲ್ಲಿ ಪ್ರತಾಪ ಸಿಂಹ ಎಂಟ್ರಿ.. IPS​ ಅಧಿಕಾರಿ ಪರ ಬ್ಯಾಟ್..!

Spread the love

ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಸಂಬಂಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ನ್ಯೂಸ್​ಫಸ್ಟ್​ ಜೊತೆ ಮಾತನಾಡಿದ ಅವರು ಐಪಿಎಸ್ ಅಧಿಕಾರಿ ರೂಪಾ ಅವರು ಎತ್ತಿರುವ ಪ್ರಶ್ನೆಗಳನ್ನು ಕೂಲಂಕುಶವಾಗಿ ನೋಡಿದೆ.

ಎಲ್ಲಾ ಪ್ರಶ್ನೆಗಳು ವಾಸ್ತವಕ್ಕೆ ಹತ್ತಿರವಾಗಿವೆ ಎಂದಿದ್ದಾರೆ.

ಅದಕ್ಕೆ‌ ಸಂಬಂಧಪಟ್ಟವರು ಉತ್ತರ ನೀಡಬೇಕು. ರಾಜಕಾರಣಿಗಳ ವಿರುದ್ಧ ಬಂದಾಗ ಪ್ರಶ್ನೆ ಮಾಡುತ್ತಾರೆ. ಆದರೆ ಇವಾಗ ಆ ವಿಚಾರಕ್ಕೆ ಸಂಬಂಧಿಸಿದಂತೆ ರೋಹಿಣಿ ಅವರು ಪ್ರತಿಕ್ರಿಯೆ ನೀಡಬೇಕು. ಸೋಶಿಯಲ್ ಮೀಡಿಯಾದಲ್ಲಿ ನನ್ನ ಮೇಲೆ ಆರೋಪ ಮಾಡಿದ್ದರು.

ಈಗಲಾದರೂ ಕ್ಷಮೆಯಾಚಿಸಲಿ

ಈ ಹಿಂದೆ ರೋಹಿಣಿ ಅವರು ಮಾತಿಗೆ ಮರುಳಾಗಿ ನನ್ನನ್ನ ಟಾರ್ಗೆಟ್ ಮಾಡಲಾಗಿತ್ತು. ನನ್ನನ್ನ ಅಪಮಾನಿಸಿದವರು ಈಗಲಾದರೂ ಕ್ಷಮೆಯಾಚಿಸಲಿ. ಮಾಧ್ಯಮಗಳಲ್ಲಿ ನನ್ನನ್ನ ಅಪಮಾನಿಸಿದ್ದರು. ರೂಪಾ‌ ಅವರು ಹೇಳಿರುವ ವಿಷಯವನ್ನ ಹೆಕ್ಕಿ ತೆಗೆಯಿರಿ. ಸಂಧಾನ ಯಾರು ಮಾಡಿಕೊಳ್ಳುತ್ತಾರೆ? ತಪ್ಪೆಸಗಿದವರು ಮಾತ್ರ ಸಂಧಾನಕ್ಕೆ ಹೋಗುತ್ತಾರೆ ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ