ನವದೆಹಲಿ: ಕಳೆದ ಎರಡು ಮೂರು ವಾರಗಳಲ್ಲಿ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಭೀಕರ ಸರಣಿ ಭೂಕಂಪದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು. ಅಲ್ಲದೆ ಭಾರಿ ಆಸ್ತಿ-ಪಾಸ್ತಿ ಹಾನಿಗೀಡಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇದರ ನಡುವೆ ಭಾರತದಲ್ಲೂ ಸದ್ಯದಲ್ಲೇ ಭಾರಿ ಭೂಕಂಪ ಸಂಭವಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್(ಎನ್ಜಿಆರ್ಐ) ತಜ್ಞರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ. ಹಿಮಾಲಯ ಭಾಗದಲ್ಲಿ ಭೂಕಂಪ ಆಗುವ ಸಾಧ್ಯತೆಗಳಿದ್ದು, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭೂಕಂಪನ ಆಗಬಹುದು ಎಂದು ಎನ್ಜಿಆರ್ಐ ಮುಖ್ಯ ವಿಜ್ಞಾನಿ ಡಾ.ಎನ್. ಪೂರ್ಣಚಂದ್ರ ರಾವ್ ಈ ಮುನ್ನೆಚ್ಚರಿಕೆ ನೀಡಿದ್ದಾರೆ.