ಬೆಂಗಳೂರು: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಈಗ ಏಕಾಏಕಿ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ.
ಮೃತಪಟ್ಟಿರುವ ಶಿಕ್ಷನನನ್ನು ಮೂಲತಃ ರಾಯಚೂರು ಜಿಲ್ಲೆಯ ಸಿಂಧೂನೂರು ಪಟ್ಟಣದ ಶಂಕರಪ್ಪ ಬೋರಡ್ಡಿ (47) ಎನ್ನಲಾಗಿದೆ.ಅವರು ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
.
ಮಂಗಳವಾರದಂದು ಅವರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರಶಿಕ್ಷಕರ ಸದನದಲ್ಲಿ ತಂದಿದ್ದರು.ಬಳಿಕ ರೂಂ ನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.
ಈ ಘಟನೆ ಬುಧುವಾರ ಮಧ್ಯರಾತ್ರಿ ನಡೆದಿದ್ದು, ನಿನ್ನೆ ತಡ ರಾತ್ರಿ ಮೃತರ ಊರಿಗೆ ಮೃತದೇಹ ರವಾನೆ ಮಾಡಲಾಗಿದೆ