Breaking News

ಕಮಿಷನ್ ಕಿರುಕುಳ: ಗ್ರಾ.ಪಂ ಸದಸ್ಯೆ ರಾಜೀನಾಮೆ

Spread the love

ರಾಯಬಾಗ : ತಾಲ್ಲೂಕಿನ ಮೇಖಳಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ, ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಬಿಜಿಪಿ ಶಾಸಕ ಡಿ.ಎಂ. ಐಹೊಳೆ ಅವರ ಕ್ಷೇತ್ರವ್ಯಾಪ್ತಿ ಇದಾಗಿದ್ದು, ಕಮಿಷನ್ ಆರೋಪ ಕೇಳಿ ಬಂದಿದೆ.

 

‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಕಮಿಷನ್ ಕಿರುಕುಳ: ಗ್ರಾ.ಪಂ ಸದಸ್ಯೆ ರಾಜೀನಾಮೆ

’14 ಮತ್ತು 15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ದಳವಾಯಿ ಶೇ 30ರಷ್ಟು ಕಮೀಷನ್ ಕೊಡಬೇಕೆಂದು ಹೇಳುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.

‘ಕಾಮಗಾರಿ ನಂತರ ಬಿಲ್ ಪಡೆಯಲು ಪಿಡಿಒ ಶೇ 10, ಎಂಜಿನಿಯರಿಂಗ್‌ ಶೇ 10, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೇರಿ ಶೇ 10 ಅಂತಾ ಒಟ್ಟು ಶೇ 30ರಷ್ಟು ಕಮಿಷನ್ ಬೇಡಿಕೆ ಇಟ್ಟಿದ್ದಾರೆ’ ಎಂದು ದೂರಿದರು.

‘ಅಭಿವೃದ್ಧಿ ಅಧಿಕಾರಿ ವಜಾಗೊಳಿಸದಿದ್ದರೆ ಇನ್ನೂ 10 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ’ ಎಂದು ಇನ್ನೊಬ್ಬ ಸದಸ್ಯ ಸುನೀಲ ಖಿಚಡೆ ಳಿಸಿದ್ದಾರೆ.

ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ದಳವಾಯಿ ಅವರನ್ನು ಸಂಪರ್ಕಿಸಿದಾಗ, ‘ನಾನು ಅನಾರೋಗ್ಯಕ್ಕೊಳಗಾಗಿ ರಜೆಯಲ್ಲಿದ್ದೇನೆ’ ಎಂದಷ್ಟೇ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ