Breaking News

ಮುಂದಿನ ತಿಂಗಳಲ್ಲೇ 7ನೇ ವೇತನ ಆಯೋಗ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಈಡೇರಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅಸ್ತು ಎಂದಿದ್ದಾರೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸೋದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

 

ಈ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆಯಲ್ಲಿ ಮಾತನಾಡಿದಂತ ಅವರು, ಈಗಾಗಲೇ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಆಯೋಗದ ಶಿಫಾರಸ್ಸು ಆಧಿರಿಸಿ ಮುಂದಿನ ಕ್ರಮ ವಹಿಸಲು 2023-24ನೇ ಸಾಲಿನ ಬಜೆಟ್ ನಲ್ಲಿ ಹಣವನ್ನು ಹೊಂದಿಸಿಡಲಾಗಿದೆ ಎಂದರು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು, ಮಾರ್ಚ್ ನೊಳಗೆ ಯೋಜನೆಯನ್ನು ಜಾರಿಗೊಳಿಸುವಂತೆ ಸೂಚಿಸಲಾಗುವುದು. ಮಧ್ಯಂತರ ವರದಿಯನ್ನು ಅವಲೋಕಿಸಿ 2023-24ನೇ ಸಾಲಿನಿಂದಲೇ ಜಾರಿಗೊಳಿಸಲಾಗಲು ಸಿದ್ಧರಿದ್ದೇವೆ ಎಂದು ಘೋಷಣೆ ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ