Breaking News

ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ

Spread the love

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ತಹಶೀಲ್ದಾರ್ ವಿಚಾರಣೆ ಆರಂಭವಾಗಿದೆ.

ಕೋವಿಡ್ ನಿರ್ವಹಣೆಯ 1.49 ಕೋಟಿ ಅನುದಾನವನ್ನು ತಮ್ಮ ಸ್ವಂತ ಖಾತೆಗೆ ತಹಶೀಲ್ದಾರ್ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ್  ವಿಧಾನಮಂಡಲ ಅಧಿವೇಶನದಲ್ಲಿ  ಆರೋಪಿಸಿದ್ದರು.

ಕೆಲ ಸಂಘಟನೆಗಳು ತನಿಖೆಗೆ ಜಿಲ್ಲಾಧಿಕಾರಿಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದರು. ಇದರಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಬುಡಾ ಆಯುಕ್ತ, ಎಡಿಎಚ್‌ಒ ಒಳಗೊಂಡ ತಂಡ ರಚಿಸಿದ್ದಾರೆ. ಈ ತಂಡ ಈಚೆಗೆ ವಿಚಾರಣೆ ಆರಂಭಿಸಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ