Breaking News
Home / Uncategorized / ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ

ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ

Spread the love

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ತಹಶೀಲ್ದಾರ್ ವಿಚಾರಣೆ ಆರಂಭವಾಗಿದೆ.

ಕೋವಿಡ್ ನಿರ್ವಹಣೆಯ 1.49 ಕೋಟಿ ಅನುದಾನವನ್ನು ತಮ್ಮ ಸ್ವಂತ ಖಾತೆಗೆ ತಹಶೀಲ್ದಾರ್ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ್  ವಿಧಾನಮಂಡಲ ಅಧಿವೇಶನದಲ್ಲಿ  ಆರೋಪಿಸಿದ್ದರು.

ಕೆಲ ಸಂಘಟನೆಗಳು ತನಿಖೆಗೆ ಜಿಲ್ಲಾಧಿಕಾರಿಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದರು. ಇದರಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಬುಡಾ ಆಯುಕ್ತ, ಎಡಿಎಚ್‌ಒ ಒಳಗೊಂಡ ತಂಡ ರಚಿಸಿದ್ದಾರೆ. ಈ ತಂಡ ಈಚೆಗೆ ವಿಚಾರಣೆ ಆರಂಭಿಸಿದೆ.


Spread the love

About Laxminews 24x7

Check Also

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ ರೇವಣ್ಣ!

Spread the loveಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ