ನಿಪ್ಪಾಣಿ: ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅವರು ತಮ್ಮ ಸಂಸ್ಥೆಗಳಲ್ಲಿ ಓದುತ್ತಿರುವ,
ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ತೆರಳಿ ಆರೋಗ್ಯ ವಿಚಾರಿಸಿ, ವಿಎಸ್ಎಂ ಫೌಂಡೇಷನ್ನಿಂದ ₹21 ಸಾವಿರ ಧನಸಹಾಯ ಮಾಡಿದರು.
5ನೇ ತರಗತಿಯ ಅಭಿಷೇಕ ವಿಕ್ರಮ ಕದಮ, 6ನೇ ತರಗತಿ ಆರ್ಯನ್ ಕುಂದನ್ ಖೋತ ಶಸ್ತ್ರಚಿಕಿತ್ಸೆಗೆ ಒಳಗಾದವರು.