Breaking News

ಮುಷ್ಕರ ನಡೆಯುವುದು ಶತಸಿದ್ಧ; ವದಂತಿಗಳಿಗೆ ಕಿವಿಗೊಡದಿರಿ: ಷಡಾಕ್ಷರಿ

Spread the love

ಬೆಂಗಳೂರು: “ಬುಧವಾರದಿಂದ ಮುಷ್ಕರ ನಡೆಯುವುದು ಶತಸಿದ್ಧ. ಯಾವ ಕಾರಣಕ್ಕೂ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ,ಈ ವಿಷಯದಲ್ಲಿ ರಾಜ್ಯ ಸರಕಾರಿ ನೌಕರರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು” ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಕರೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಹಿರಿಯ ಅಧಿಕಾರಿಗಳೂ ಸೇರಿದಂತೆ ರಾಜ್ಯ ಸರಕಾರದ ಎಲ್ಲ ನೌಕರರು ಈ ಮುಷ್ಕರದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯಕ್ಕೆ ಕೈ ಜೋಡಿಸಬೇಕು” ಎಂದು ಅವರು ಮನವಿ ಮಾಡಿದರು.

“ಬೇಡಿಕೆಗಳ ಈಡೇರಿಕೆ ಕುರಿತಂತೆ ಸರಕಾರದೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಬೇಡಿಕೆ ಈಡೇರುವವರೆಗೆ ನಿರ್ಧಾರದಿಂದ ಹಿಂದಡಿ ಇಡುವ ಮಾತೇ ಉದ್ಭವಿಸುವುದಿಲ್ಲ.ಈ ವಿಷಯದಲ್ಲಿ ಹರಡಲಾಗುವ ಯಾವುದೇ ವದಂತಿಗಳನ್ನು ಸರಕಾರಿ ನೌಕರರು ನಂಬಬಾರದು” ಎಂದು ಅವರು ಹೇಳಿದರು.

“ಮುಷ್ಕರದ ಯಶಸ್ಸಿಗೆ ಎಲ್ಲ ರೀತಿಯಲ್ಲಿ ಶ್ರಮಿಸಲಾಗುತ್ತಿದ್ದು ಪ್ರಮುಖ ಎರಡೂ ಬೇಡಿಕೆಗಳನ್ನು ಸರಕಾರ ಈಡೇರಿಸುವವರೆಗೆ ಹೋರಾಟ ಮುಂದುವರಿಯಲಿದೆ” ಎಂದು ಅವರು ಹೇಳಿದ್ದಾರೆ. ಈ ಮೂಲಕ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲ ಜಿಜ್ಞಾಸೆಗಳಿಗೆ ಷಡಾಕ್ಷರಿ ಅವರು ತೆರೆ ಎಳೆದಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ