Breaking News
Home / ರಾಜಕೀಯ / ಬನವಾಸಿಗೆ ಆಗಮಿಸಿದ ಸಿಎಂ ಬೊಮ್ಮಾಯಿ: ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪ್ರಮುಖರು

ಬನವಾಸಿಗೆ ಆಗಮಿಸಿದ ಸಿಎಂ ಬೊಮ್ಮಾಯಿ: ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪ್ರಮುಖರು

Spread the love

ಶಿರಸಿ: ಕನ್ನಡ ಪ್ರಥಮ ರಾಜಧಾನಿ ಬನವಾಸಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಎದುರು ಸ್ಥಳೀಯ ಕಾಂಗ್ರೆಸ್ ಪ್ರಮುಖರು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ.

ಜನರ ಉತ್ಸವವನ್ನಾಗಿ ಕದಂಬೋತ್ಸವವನ್ನು ಆಚರಿಸಬೇಕಿತ್ತು.

ಇದು ಬಿಜೆಪಿ ಉತ್ಸವದಂತೆ ನಡೆಸಲಾಗುತ್ತಿದೆ. ಬಿಜೆಪಿ ಚಿಹ್ನೆಯ ಟಿಶರ್ಟ್ ಹಂಚಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಾವು ಕಾಂಗ್ರೆಸ್ ಶಾಲು ಹಾಕಿ ಬಂದಿದ್ದು ಕೆಲ‌ ಕಾಲ ಗೊಂದಲ‌ ಉಂಟಾಗಿತ್ತು.
ಸಿಎಂ ತೆರಳುವ ಮಾರ್ಗದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ, ಶ್ರೀನಿವಾಸ ಧಾತ್ರಿ ಇತರರು ಇದ್ದು ಘೋಷಣೆ ಕೂಗಿದರು‌.

ಏತ ನೀರಾವರಿ ಯೋಜನೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದೆ.

ಅದನ್ನು ತಮ್ಮ ಕಾರ್ಯಕ್ರಮದಂತೆ ಸಚಿವ ಶಿವರಾಮ ಹೆಬ್ಬಾರ ಬಿಂಬಿಸುತ್ತಾರೆ ಎಂದೂ‌ ಪ್ರತಿಪಾದಿಸಿದರು.

ಎಎಸ್ ಪಿ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು ಕಾಂಗ್ರೆಸ್ ನಾಯಕ ವಿ.ಎಸ್.ಪಾಟೀಲ ಹಾಗೂ ಶ್ರೀನಿವಾಸ ಭಟ್ ಧಾತ್ರಿ ಅವರನ್ನು ಬಂಧಿಸಲಾಯಿತು.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ