Breaking News
Home / ರಾಜಕೀಯ / ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆಯನ್ನುಅನಾವರಣ ಮಾಡಿದ ಸಿಎಂ ಬೊಮ್ಮಾಯಿ

ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆಯನ್ನುಅನಾವರಣ ಮಾಡಿದ ಸಿಎಂ ಬೊಮ್ಮಾಯಿ

Spread the love

ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅನಾವರಣ ಮಾಡಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ರಾಜಹಂಸಗಡ ಕೋಟೆಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಶಿವಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರತಿಮೆ ಅನಾವರಣ ಮಾಡಿದರು.

43 ಅಡಿ ಎತ್ತರದ ಬೃಹತ್ ಶಿವಾಜಿ ಪ್ರತಿಮೆ ಇದಾಗಿದ್ದು, ಇದೇ ವೇಳೆ ರಾಜಹಂಸಗಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಸಿಎಂ ಚಾಲನೆ ನೀಡಿದರು. ಸಚಿವ ಗೋವಿಂದ ಕಾರಜೋಳ, ಸುನೀಲ್ ಕುಮಾರ್, ಸಂಸದೆ ಮಂಗಳಾ ಅಂಗಡಿ, ಶಾಸಕರಾದ ಅಭಯ. ಪಾಟೀಲ, ಅನಿಲ ಬೆನಕೆ, ರಮೇಶ್ ಜಾರಕಿಹೊಳಿ, ಮೊದಲಾದವರು ಉಪಸ್ಥಿತರಿದ್ದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕರಾದ ನಂತರ ವಿಶೇಷ ಪ್ರಯತ್ನ ಮಾಡಿ ರಾಜಹಂಸಗಡ ಕೋಟೆ ಅಭಿವೃದ್ಧಿ ಮತ್ತು ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಮಾಡಿಸಿದ್ದಾರೆ.

 

ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ:

ದೇಶ ಕಂಡ ಅಪ್ರತಿಮ ನಾಯಕ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ಕೆಚ್ಚೆದೆಯ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದು ಸಂತಸ ತಂದಿದೆ. ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಆರ್.ಐ.ಡಿ.ಎಲ್, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ (ಮಾ.2) ರಾಜಹಂಸಗಡ ಕೋಟೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಈ ಅನುದಾನವನ್ನು ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಪೂರಕವಾಗಿ ಸಮುದಾಯ ಭವನ, ವಿಶ್ರಾಂತಿ ಗೃಹ ನಿರ್ಮಾಣ ಜೊತೆಗೆ ಇತರ ಮೂಲಭೂತ ಸೌಕರ್ಯ ಕಲ್ಪಿಸಿ, ಪ್ರವಾಸಿ ತಾಣವನ್ನಾಗಿ ಮಾರ್ಪಾಡು ಮಾಡಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ