Breaking News

ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ: ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: ಜಿಲ್ಲೆಯಾದ್ಯಂತ, ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.

ಗೋಕಾಕ್ ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ನದಿ ಹಳ್ಳ ತುಂಬಿ ಹರಿಯುತ್ತಿವೆ. ನದಿ ಸಮೀಪದ ಗ್ರಾಮಸ್ಥರು ಜಾನುವಾರುಗಳನ್ನು ನದಿ, ಹಳ್ಳದ ತೀರದ ಕಡೆ ಬಿಡಬೇಡಿ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದಿದ್ದಾರೆ.

ಇನ್ನೂ ಎರಡು ದಿನಗಳ ಕಾಲ ಮಳೆ ಹೀಗೆ ಮುಂದುವರಿಯುವ ಸಾಧ್ಯತೆಯಿದ್ದು, ರೈತರು ಹಾಗೂ ಸಾರ್ವಜನಿಕರು ಆದಷ್ಟು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ